June 11, 2014



ಆ ವಯಸ್ಸಿನಲ್ಲಿ ಹಾಗೆ ಮಾಡಿದ್ದು ತಪ್ಪೋ ಸರಿಯೋ ಹೇಳೋದು ಕಷ್ಟ..ಆದರೆ ಅದನ್ನು ಬರೆದುಕೊಳ್ಳೋ ಅವಶ್ಯಕತೆ ಇರಲಿಲ್ಲವೇನೋ...ಇನ್ನು ಅದನ್ನು Quote ಮಾಡೋದು,ಮಾಧ್ಯಮ ಪ್ರಚಾರ ಕೊಟ್ಟು ದೊಡ್ಡ ಸುದ್ದಿಯಾಗಿಸೋದು,ಯಾವಾಗಲೋ ಆಗಿದ್ದನ್ನು,ಬರೆದಿದ್ದನ್ನು ಈಗ ಚರ್ಚಿಸೋದು...ಇದು ದೊಡ್ಡ ದುರಂತ...

**********************************************************************************************************

".......ಮಾಡಿದ್ದಿದೆ" ಎಂಬ ಸಾಲು ಎಲ್ಲರ ಗಮನ ಸೆಳೆದು,ಆಕ್ರೋಶಕ್ಕೆ ಕಾರಣವಾಗಿ ವಿವಾದವಾಗಿಬಿಡುತ್ತದೆ. ಆದರೆ ಅದಕ್ಕಂಟಿಕೊಂಡೇ ಇರುವ ಸಾಲು ಯಾರ ಗಮನಕ್ಕೂ ಬರೋದಿಲ್ಲ(?????)
"ಭಯದಿಂದ ನಿದ್ದೆಗೆಟ್ಟ ಆ ದಿನದ ರಾತ್ರಿಗಳು ನೆನಪಾಗುತ್ತವೆ"
ಈ ಸಾಲನ್ನೂ ಸೇರಿಸಿ 'ಓದಿಕೊಂಡಿದ್ದರೆ' ಕನಿಷ್ಟ ಪಕ್ಷ ವಿವಾದದ ಪ್ರಖರತೆ ಕಡಿಮೆಯಿರುತ್ತಿತ್ತೇನೊ!!!
ವಿಷಯ ಇಷ್ಟೇ...ನಮಗೆ ಬೇಕಾದದ್ದು ವಿವಾದ,ಅದಕ್ಕಾಗಿ ನಾವು 'ಏನನ್ನು' ಬೇಕಾದರೂ ಕೆದಕಲು ತಯಾರ್!!!

URA ಅನುವಾದಿಸಿದ ಬ್ರೆಕ್ಟನ ಸಾಲು ನೆನಪಾಗುತ್ತಿದೆ...
'ನಿನ್ನ ಗೋರಿ ಮೇಲೆ
ಸತ್ತ ತಾರೀಖು
ಸತ್ತವನ ಹೆಸರು
ಅದಕ್ಕೊಂದು ಕಲ್ಲು
ಏನೂ ಬೇಡ
ಸತ್ತವನನ್ನೇ ಯಾರೆಂದು
ಪತ್ತೆ ಮಾಡಿ ಪೀಡಿಸಿಯಾರು;ಜೋಕೆ
ಇರಲೇ ಇಲ್ಲ ಎನ್ನುವ ಹಾಗೆ ಇದ್ದು ಬಿಡು.'


No comments:

Post a Comment